ಸಿನಿಮಾ - ರಂಗಭೂಮಿ
ಇತಿಹಾಸ - ಮಾಹಿತಿ - ಮನರಂಜನೆ

ಕನ್ನಯ್ಯರಾಮ – ಅನಂತನಾಗ್‌

ಪೋಸ್ಟ್ ಶೇರ್ ಮಾಡಿ

ಆಗಿನ್ನೂ ಅನಂತನಾಗ್ ಕನ್ನಡಿಗರಿಗೆ ಹೆಚ್ಚು ಪರಿಚಿತರಾಗಿರಲಿಲ್ಲ. ‘ಅಂಕುರ್’, ‘ನಿಶಾಂತ್’, ‘ಮಂಥನ್’ ಹಿಂದಿ ಸಿನಿಮಾಗಳು ಅವರಿಗೆ ಹೆಸರು ತಂದುಕೊಟ್ಟಿದ್ದವು. ‘ಸಂಕಲ್ಪ’, ‘ದೇವರಕಣ್ಣು’, ‘ಹಂಸಗೀತೆ’ ಕನ್ನಡ ಚಿತ್ರಗಳಲ್ಲಿ ಅಭಿನಯಿಸಿದ್ದರು. ‘ಬಯಲು ದಾರಿ’ ಇನ್ನೂ ತೆರೆಕಂಡಿರಲಿಲ್ಲ. ಮುಂಬಯಿ-ಬೆಂಗಳೂರೆಂದು ಓಡಾಡಿಕೊಂಡಿದ್ದ ಅವರು ವುಡ್‌ಲ್ಯಾಂಡ್ಸ್‌ ಹೋಟೆಲ್‌ನಲ್ಲಿ ಉಳಿದುಕೊಳ್ಳುತ್ತಿದ್ದರಂತೆ. ಆಗೊಂದು ದಿನ ಸಿನಿಮಾ ಸ್ಥಿರಚಿತ್ರ ಛಾಯಾಗ್ರಾಹಕ ಪ್ರಗತಿ ಅಶ್ವತ್ಥ ನಾರಾಯಣ ಅವರು ‘ಮೇನಕಾ’ ಸಿನಿಪತ್ರಿಕೆಗೆಂದು ಅನಂತ್ ಫೋಟೋ ಕ್ಲಿಕ್ಕಿಸಲು ವುಡ್‌ಲ್ಯಾಂಡ್ಸ್‌ಗೆ ಹೋಗಿದ್ದರಂತೆ(1976). ಆಗ ಅನಂತ್ ‘ಕನ್ನೇಶ್ವರ ರಾಮ’ ಸಿನಿಮಾಗಾಗಿ ತಯಾರಿ ನಡೆಸಿದ್ದರು. ಎಸ್.ಕೆ.ನಾಡಿಗ್‌ರ ‘ಕನ್ನಯ್ಯರಾಮ’ ಕಾದಂಬರಿ ಆಧರಿಸಿ ಎಂ.ಎಸ್.ಸತ್ಯು ನಿರ್ದೇಶಿಸಿದ್ದ ಚಿತ್ರವಿದು. ಬಿ.ವಿ.ಕಾರಂತರು ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದರು. ಶಬಾನಾ ಅಜ್ಮಿ, ಅಮೋಲ್ ಪಾಲೇಕರ್ ಮತ್ತಿತರರು ನಟಿಸಿದ್ದ ಚಿತ್ರ ಕನ್ನಡ ಮತ್ತು ಹಿಂದಿಯಲ್ಲಿ ಏಕಕಾಲಕ್ಕೆ ಚಿತ್ರೀಕರಣಗೊಂಡಿತ್ತು. ಹೋಟೆಲ್‌ನ ಕೋಣೆಯಲ್ಲಿ ವಿವಿದ ಭಂಗಿಗಳಲ್ಲಿ ಅನಂತ್‌ರ ಫೋಟೋ ಕ್ಲಿಕ್ಕಿಸಿಕೊಂಡ ಅಶ್ವತ್ಥರು ‘ಕನ್ನಯ್ಯರಾಮ’ ಕಾದಂಬರಿ ಓದುವ ಅನಂತ್‌ರನ್ನೂ ತಮ್ಮ ಕ್ಯಾಮೆರಾದಲ್ಲಿ ಸೆರೆಹಿಡಿದರು.

ಇನ್ನಷ್ಟು ಕಥೆ

ಹೆಳವನಕಟ್ಟೆ ಗಿರಿಯಮ್ಮ

ಸಂಕೇತ್ ಸ್ಟುಡಿಯೋದಲ್ಲಿ ‘ಹೆಳವನಕಟ್ಟೆ ಗಿರಿಯಮ್ಮ’ ಚಿತ್ರದ ಹಾಡಿನ ಧ್ವನಿಮುದ್ರಣ ಸಂದರ್ಭ. ಪಿಬಿಎಸ್ ಜೊತೆ

ಮೂವಿಂಗ್ ಶಾಟ್!

ಈಗ ಸಿನಿಮಾ, ಕಿರುತೆರೆ ಚಿತ್ರೀಕರಣಗಳಲ್ಲಿ ಜಿಮ್ಮೀ ಜಿಬ್ ಸೇರಿದಂತೆ ಆಧುನಿಕ ಪರಿಕರಗಳಿಂದ ಮೂವಿಂಗ್‌

ಜನಪ್ರಿಯ ಪೋಸ್ಟ್ ಗಳು

18ರ ಹರೆಯದಲ್ಲೇ ಚೀಫ್ ಮೇಕಪ್‌ಮ್ಯಾನ್‌!

ಪುಟ್ಟಣ್ಣ ಕಣಗಾಲ್ ನಿರ್ದೇಶನದ ‘ಸಾಕ್ಷಾತ್ಕಾರ’ ಚಿತ್ರಕ್ಕೆ ಎಂ.ಎಸ್‌.ಸುಬ್ಬಣ್ಣ ಮೇಕಪ್ ಕಲಾವಿದರಾಗಿ ಕೆಲಸ ಮಾಡುತ್ತಿದ್ದರು. ಕಂಠೀರವ ಸ್ಟುಡಿಯೋದಲ್ಲಿ ಎರಡು ಶೆಡ್ಯೂಲ್ ಚಿತ್ರೀಕರಣ

ಇದು ನಟಿ ಆರತಿ ಕ್ಲಿಕ್ಕಿಸಿದ ಫೋಟೊ!

ತಮ್ಮ ಕ್ಯಾಮರಾಗಳ ಮೂಲಕ ಎಲ್ಲರ ನೆನಪುಗಳನ್ನು ಹಿಡಿದಿಡುವ ಛಾಯಾಗ್ರಾಹಕರು ತಮಗಾಗಿ ಫೋಟೋ ತೆಗೆದಿಟ್ಟುಕೊಳ್ಳುವುದು ತೀರಾ ಅಪರೂಪ. ಅದರಲ್ಲೂ ಅಂದಿನ ದುಬಾರಿ