ಸಿನಿಮಾ - ರಂಗಭೂಮಿ
ಇತಿಹಾಸ - ಮಾಹಿತಿ - ಮನರಂಜನೆ

ಕುವೆಂಪು ಒಪ್ಪಿಗೆ ಪತ್ರ

ಪೋಸ್ಟ್ ಶೇರ್ ಮಾಡಿ

‘ಅನಿರೀಕ್ಷಿತ’ (1970) ಸಿನಿಮಾದಲ್ಲಿ ಕುವೆಂಪು ರಚನೆಯ ‘ಸೊಬಗಿನ ಸೆರೆಮನೆಯಾಗಿಹೆ ನೀನು…’ ಗೀತೆ ಬಳಕೆಯಾಗಿದೆ. ಕುವೆಂಪು ಅವರ ‘ಷೋಡಶಿ’ ಕವನಸಂಕಲನದಲ್ಲಿನ ಪದ್ಯವಿದು. ಚಿತ್ರದ ನಿರ್ಮಾಪಕ, ನಿರ್ದೇಶಕ ನಾಗೇಶ್ ಬಾಬ ಈ ಪದ್ಯ ಬಳಸಿಕೊಳ್ಳಲು ಕುವೆಂಪು ಅವರಿಂದ ಪಡೆದುಕೊಂಡ ಒಪ್ಪಿಗೆ ಪತ್ರವಿದು (1968). ಈ ಕವಿತೆಗೆ ಗೌರವ ಸಂಭಾವನೆಯಾಗಿ 200 ರೂಪಾಯಿ ಸಂದಾಯವಾಗಿದ್ದು, ಕುವೆಂಪು ಸಹಿ (‘ಕೆ.ವಿ.ಪುಟ್ಟಪ್ಪ’) ಹಾಕಿದ್ದಾರೆ.

ಈ ಚಿತ್ರದಲ್ಲಿ ಪ್ರೇಮಕವಿ ಕೆ.ಎಸ್.ನರಸಿಂಹಸ್ವಾಮಿ ಅವರ ಮೂರು ಹಾಡುಗಳು ಬಳಕೆಯಾಗಿವೆ. ಕೆಎಸ್‍ನ ಅವರು ಮದರಾಸಿಗೆ ಹೋಗಿ ಚಿತ್ರದ ಸನ್ನಿವೇಶಗಳಿಗೆ ಹೊಂದಿಕೆಯಾಗುವ ಎರಡು ಹಾಡುಗಳನ್ನು ಬರೆದುಕೊಟ್ಟಿದ್ದರು ಎನ್ನುವುದು ವಿಶೇಷ! ‘ಅನಿರೀಕ್ಷಿತ’ ಚಿತ್ರದ ನಿರ್ದೇಶಕ ನಾಗೇಶ್ ಬಾಬ ಅವರು ಸ್ಥಿರಚಿತ್ರ ಛಾಯಾಗ್ರಾಹಕ ಪ್ರಗತಿ ಅಶ್ವತ್ಥರ ಹಿರಿಯ ಸಹೋದರ.

ಇನ್ನಷ್ಟು ಕಥೆ

ಹೆಳವನಕಟ್ಟೆ ಗಿರಿಯಮ್ಮ

ಸಂಕೇತ್ ಸ್ಟುಡಿಯೋದಲ್ಲಿ ‘ಹೆಳವನಕಟ್ಟೆ ಗಿರಿಯಮ್ಮ’ ಚಿತ್ರದ ಹಾಡಿನ ಧ್ವನಿಮುದ್ರಣ ಸಂದರ್ಭ. ಪಿಬಿಎಸ್ ಜೊತೆ

ಮೂವಿಂಗ್ ಶಾಟ್!

ಈಗ ಸಿನಿಮಾ, ಕಿರುತೆರೆ ಚಿತ್ರೀಕರಣಗಳಲ್ಲಿ ಜಿಮ್ಮೀ ಜಿಬ್ ಸೇರಿದಂತೆ ಆಧುನಿಕ ಪರಿಕರಗಳಿಂದ ಮೂವಿಂಗ್‌

ಕನ್ನಯ್ಯರಾಮ – ಅನಂತನಾಗ್‌

ಆಗಿನ್ನೂ ಅನಂತನಾಗ್ ಕನ್ನಡಿಗರಿಗೆ ಹೆಚ್ಚು ಪರಿಚಿತರಾಗಿರಲಿಲ್ಲ. ‘ಅಂಕುರ್’, ‘ನಿಶಾಂತ್’, ‘ಮಂಥನ್’ ಹಿಂದಿ ಸಿನಿಮಾಗಳು

ಜನಪ್ರಿಯ ಪೋಸ್ಟ್ ಗಳು

ಹಾಡಿನ ಪುಸ್ತಕ

ಹೆಚ್ಚಿನ ಸಂಖ್ಯೆಯ ಪತ್ರಿಕೆಗಳು ಹಾಗೂ ವಿದ್ಯುನ್ಮಾನ ಮಾಧ್ಯಮಗಳಿಲ್ಲದ ಆಗಿನ ಕಾಲದಲ್ಲಿ ಸಿನಿಮಾ ಪ್ರಚಾರಕ್ಕೆ ವಿವಿಧ ತಂತ್ರಗಳ ಮೊರೆಹೋಗಬೇಕಿತ್ತು. ಇಂತಹ ಹಾಡಿನ

‘ಗಂಧರ್ವಗಿರಿ’ ಮುಹೂರ್ತ

`ಶಂಕರಾಭರಣಂ’ ತೆಲುಗು ಸಿನಿಮಾ ಖ್ಯಾತಿಯ ನಟ ಸೋಮಯಾಜುಲು ಮುಖ್ಯಪಾತ್ರದಲ್ಲಿ ನಟಿಸಿದ್ದ `ಗಂಧರ್ವಗಿರಿ’ (1983) ಮುಹೂರ್ತದ ಸಂದರ್ಭವಿದು. ಚನ್ನರಾಯಪಟ್ಟಣ ಸಮೀಪದ ನುಗ್ಗೇಹಳ್ಳಿಯ

ಮೇಕಪ್‌ಮ್ಯಾನ್ ರಾಜಕುಮಾರ್!

ಮೈಸೂರು ಸಮೀಪದ ಮಹದೇವಪುರದಲ್ಲಿ ‘ಮನಮೆಚ್ಚಿದ ಹುಡುಗಿ’ (1987) ಸಿನಿಮಾದ ಚಿತ್ರೀಕರಣ ನಡೆಯುತ್ತಿತ್ತು. ಎಂ.ಎಸ್‌.ರಾಜಶೇಖರ್‌ ನಿರ್ದೇಶನದ ಈ ಸಿನಿಮಾದಲ್ಲಿ ಶಿವರಾಜಕುಮಾರ್ ಮತ್ತು