ಸಿನಿಮಾ
ಇತಿಹಾಸ - ಮಾಹಿತಿ - ಮನರಂಜನೆ

ಬೆಟ್ಟದ ಕಳ್ಳ

ಪೋಸ್ಟ್ ಶೇರ್ ಮಾಡಿ

ಕೊಯಮತ್ತೂರಿನ ಪಕ್ಷಿರಾಜ ಸ್ಟುಡಿಯೋದಲ್ಲಿ ‘ಬೆಟ್ಟದ ಕಳ್ಳ’ (1957) ಚಿತ್ರೀಕರಣದ ಸಂದರ್ಭ. ನಿರ್ದೇಶಕ ಶ್ರೀರಾಮುಲು ನಾಯ್ಡು ಅವರು ಚಿತ್ರದ ಕಲಾವಿದರಾದ ಆರ್.ನಾಗೇಂದ್ರರಾಯರು ಮತ್ತು ಉದಯಕುಮಾರ್ ರನ್ನು ನಿರ್ದೇಶಿಸುತ್ತಿದ್ದಾರೆ. ಈ ಚಿತ್ರದ ನಿರ್ಮಾಪಕರೂ ಆದ ಶ್ರೀರಾಮುಲು ನಾಯ್ಡು ಪಕ್ಷಿರಾಜ ಸ್ಟುಡಿಯೋ ಮಾಲೀಕರೂ ಹೌದು. ಮುಂದಿನ ದಿನಗಳಲ್ಲಿ ಪಕ್ಷಿರಾಜ ಸ್ಟುಡಿಯೋ ಬೆಂಗಳೂರಿಗೆ (ಕನ್ನಿಂಗ್ ಹ್ಯಾಂ ರಸ್ತೆ) ಶಿಫ್ಟ್ ಆಗಿ ಚಾಮುಂಡೇಶ್ವರಿ ಸ್ಟುಡಿಯೋ ಎಂದು ಮರುನಾಮಕರಣಗೊಂಡಿತು. ಮೊದಲು ಒಂದು ಫ್ಲೋರ್ ಇದ್ದ ಸ್ಟುಡಿಯೋದಲ್ಲಿ ನಂತರ ಮೂರು ಫ್ಲೋರ್‍ಗಳಾದವು. ಉತ್ತಮ ಸೌಲಭ್ಯ ಹೊಂದಿದ್ದ ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ನೂರಾರು ಸಿನಿಮಾಗಳು ಚಿತ್ರೀಕರಣಗೊಂಡಿವೆ. ಈಗ ಥಿಯೇಟರ್, ರೆಕಾರ್ಡಿಂಗ್ ಸ್ಟುಡಿಯೋ ಮಾತ್ರ ಉಳಿದಿವೆ.

ಇನ್ನಷ್ಟು ಕಥೆ

ಹೆಳವನಕಟ್ಟೆ ಗಿರಿಯಮ್ಮ

ಸಂಕೇತ್ ಸ್ಟುಡಿಯೋದಲ್ಲಿ ‘ಹೆಳವನಕಟ್ಟೆ ಗಿರಿಯಮ್ಮ’ ಚಿತ್ರದ ಹಾಡಿನ ಧ್ವನಿಮುದ್ರಣ ಸಂದರ್ಭ. ಪಿಬಿಎಸ್ ಜೊತೆ

ಜನಪ್ರಿಯ ಪೋಸ್ಟ್ ಗಳು

‘ಬಿಳಿ ಹೆಂಡ್ತಿ’ ಮಾರ್ಗರೆಟ್

ಅಮೆರಿಕ ಮೂಲದ ಮಾರ್ಗರೆಟ್ ಥಾಮ್ಸನ್ ‘ಬಿಳಿ ಹೆಂಡ್ತಿ’ ಚಿತ್ರಕ್ಕೆ ಆಯ್ಕೆಯಾದದ್ದು ಆಕಸ್ಮಿಕ. ಹದಿನೆಂಟರ ಹರೆಯದ ಮಾರ್ಗರೆಟ್ ಆಗ ‘ಭಾರತದ ಗ್ರಾಮೀಣ

ಕಲೋಪಾಸಕರು – ಪತ್ರಕರ್ತ ಹಾ.ವೆಂ.ಸೀತಾರಾಮಯ್ಯ ನೆನಪು

ಈ ಫೋಟೋದಲ್ಲಿ ನಟ ಅಶ್ವತ್ಥ್ ಅವರೊಂದಿಗಿರುವವರು ಪತ್ರಕರ್ತ ಹಾ.ವೆಂ.ಸೀತಾರಾಮಯ್ಯನವರು. ವೃತ್ತಿಯ ಬಹುಪಾಲು ಅವಧಿ ಕನ್ನಡಪ್ರಭ ದಿನಪತ್ರಿಕೆಯಲ್ಲಿ ಕಾರ್ಯನಿರ್ವಹಣೆ. ರಂಗಭೂಮಿ ಮತ್ತು

‘ಗಂಧರ್ವಗಿರಿ’ ಮುಹೂರ್ತ

`ಶಂಕರಾಭರಣಂ’ ತೆಲುಗು ಸಿನಿಮಾ ಖ್ಯಾತಿಯ ನಟ ಸೋಮಯಾಜುಲು ಮುಖ್ಯಪಾತ್ರದಲ್ಲಿ ನಟಿಸಿದ್ದ `ಗಂಧರ್ವಗಿರಿ’ (1983) ಮುಹೂರ್ತದ ಸಂದರ್ಭವಿದು. ಚನ್ನರಾಯಪಟ್ಟಣ ಸಮೀಪದ ನುಗ್ಗೇಹಳ್ಳಿಯ

ರಾಜ್‌ ಅವರಿಗೆ ಕಲರ್ ಷರ್ಟ್ ಹಾಕಿಸಿದ್ದು!

ಸ್ಥಿರಚಿತ್ರ ಛಾಯಾಗ್ರಾಹಕ ಪ್ರಗತಿ ಅಶ್ವತ್ಥ ನಾರಾಯಣ ಅವರು ಸಿನಿ ಪತ್ರಿಕೆಗಳಿಗೂ ಕಾರ್ಯನಿರ್ವಹಿಸಿದ್ದಾರೆ. ವಿ.ಎನ್.ಸುಬ್ಬರಾವ್ ಸಂಪಾದಕತ್ವದ `ತಾರಾಲೋಕ’ ಪತ್ರಿಕೆಯ ಸಂದರ್ಭವೊಂದು ಅವರ