ಸಿನಿಮಾ - ರಂಗಭೂಮಿ
ಇತಿಹಾಸ - ಮಾಹಿತಿ - ಮನರಂಜನೆ

‘ಗಂಧರ್ವಗಿರಿ’ ಮುಹೂರ್ತ

ಪೋಸ್ಟ್ ಶೇರ್ ಮಾಡಿ

`ಶಂಕರಾಭರಣಂ’ ತೆಲುಗು ಸಿನಿಮಾ ಖ್ಯಾತಿಯ ನಟ ಸೋಮಯಾಜುಲು ಮುಖ್ಯಪಾತ್ರದಲ್ಲಿ ನಟಿಸಿದ್ದ `ಗಂಧರ್ವಗಿರಿ’ (1983) ಮುಹೂರ್ತದ ಸಂದರ್ಭವಿದು. ಚನ್ನರಾಯಪಟ್ಟಣ ಸಮೀಪದ ನುಗ್ಗೇಹಳ್ಳಿಯ ಹೊಯ್ಸಳ ದೇವಾಲಯದಲ್ಲಿ ಆರಂಭವಾದ ಚಿತ್ರಕ್ಕೆ ಆಗ ಸಚಿವರಾಗಿದ್ದ ಎಚ್.ಎಸ್.ಶ್ರೀಕಂಠಯ್ಯ ಕ್ಲ್ಯಾಪ್ ಮಾಡಿದ್ದರು. ಸಾಯಿಸುತೆ ಅವರ ಕೃತಿಯನ್ನು ಆಧರಿಸಿ ಅದೇ ಶೀರ್ಷಿಕೆಯಡಿ ತಯಾರಾದ ಸಿನಿಮಾ `ಗಂಧರ್ವಗಿರಿ’. ವಿಷ್ಣುವರ್ಧನ್ ಹೀರೋ ಆಗಿದ್ದ ಚಿತ್ರದಲ್ಲಿ ಸೋಮಯಾಜುಲು ಅವರು ನಾಯಕನಟಿ ಆರತಿ ತಂದೆಯಾಗಿ ಅಭಿನಯಿಸಿದ್ದಾರೆ. ಆರತಿ ಸಹೋದರರಾದ ಮುಕುಂದ ಮತ್ತು ಧನಂಜಯ ಚಿತ್ರದ ನಿರ್ಮಾಪಕರು. ಪುಟ್ಟಣ್ಣ ಕಣಗಾಲ್ ಅವರೊಂದಿಗೆ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದ ದತ್ತು (ಧನಂಜಯ) `ಗಂಧರ್ವಗಿರಿ’ ನಿರ್ದೇಶಕ.

ಕೆ.ವಿಶ್ವನಾಥ್ ನಿರ್ದೇಶನದ `ಶಂಕರಾಭರಣಂ’ (1980) ತೆಲುಗು ಚಿತ್ರರಂಗದಲ್ಲಿ ಮೈಲುಗಲ್ಲು ಎನಿಸಿಕೊಂಡ ಸಿನಿಮಾ. ಅತ್ಯುತ್ತಮ ಸಿನಿಮಾ, ಅತ್ಯುತ್ತಮ ಸಂಗೀತ (ಕೆ.ವಿ.ಮಹದೇವನ್), ಅತ್ಯುತ್ತಮ ಗಾಯಕ (ಎಸ್‍ಪಿಬಿ), ಅತ್ಯುತ್ತಮ ಗಾಯಕಿ (ವಾಣಿ ಜಯರಾಂ) ರಾಷ್ಟ್ರಪ್ರಶಸ್ತಿಗಳಿಗೆ ಚಿತ್ರ ಭಾಜನವಾಗಿತ್ತು. ಅತ್ಯುತ್ತಮ ಪಾತ್ರಪೋಷಣೆಗಾಗಿ ಸೋಮಯಾಜುಲು ಅವರಿಗೆ ಫಿಲ್ಮ್‍ಫೇರ್ ಪ್ರಶಸ್ತಿ ಸಂದಿತ್ತು.

ಇನ್ನಷ್ಟು ಕಥೆ

ಹೆಳವನಕಟ್ಟೆ ಗಿರಿಯಮ್ಮ

ಸಂಕೇತ್ ಸ್ಟುಡಿಯೋದಲ್ಲಿ ‘ಹೆಳವನಕಟ್ಟೆ ಗಿರಿಯಮ್ಮ’ ಚಿತ್ರದ ಹಾಡಿನ ಧ್ವನಿಮುದ್ರಣ ಸಂದರ್ಭ. ಪಿಬಿಎಸ್ ಜೊತೆ

ಮೂವಿಂಗ್ ಶಾಟ್!

ಈಗ ಸಿನಿಮಾ, ಕಿರುತೆರೆ ಚಿತ್ರೀಕರಣಗಳಲ್ಲಿ ಜಿಮ್ಮೀ ಜಿಬ್ ಸೇರಿದಂತೆ ಆಧುನಿಕ ಪರಿಕರಗಳಿಂದ ಮೂವಿಂಗ್‌

ಕನ್ನಯ್ಯರಾಮ – ಅನಂತನಾಗ್‌

ಆಗಿನ್ನೂ ಅನಂತನಾಗ್ ಕನ್ನಡಿಗರಿಗೆ ಹೆಚ್ಚು ಪರಿಚಿತರಾಗಿರಲಿಲ್ಲ. ‘ಅಂಕುರ್’, ‘ನಿಶಾಂತ್’, ‘ಮಂಥನ್’ ಹಿಂದಿ ಸಿನಿಮಾಗಳು

ಜನಪ್ರಿಯ ಪೋಸ್ಟ್ ಗಳು

18ರ ಹರೆಯದಲ್ಲೇ ಚೀಫ್ ಮೇಕಪ್‌ಮ್ಯಾನ್‌!

ಪುಟ್ಟಣ್ಣ ಕಣಗಾಲ್ ನಿರ್ದೇಶನದ ‘ಸಾಕ್ಷಾತ್ಕಾರ’ ಚಿತ್ರಕ್ಕೆ ಎಂ.ಎಸ್‌.ಸುಬ್ಬಣ್ಣ ಮೇಕಪ್ ಕಲಾವಿದರಾಗಿ ಕೆಲಸ ಮಾಡುತ್ತಿದ್ದರು. ಕಂಠೀರವ ಸ್ಟುಡಿಯೋದಲ್ಲಿ ಎರಡು ಶೆಡ್ಯೂಲ್ ಚಿತ್ರೀಕರಣ

ಇದು ನಟಿ ಆರತಿ ಕ್ಲಿಕ್ಕಿಸಿದ ಫೋಟೊ!

ತಮ್ಮ ಕ್ಯಾಮರಾಗಳ ಮೂಲಕ ಎಲ್ಲರ ನೆನಪುಗಳನ್ನು ಹಿಡಿದಿಡುವ ಛಾಯಾಗ್ರಾಹಕರು ತಮಗಾಗಿ ಫೋಟೋ ತೆಗೆದಿಟ್ಟುಕೊಳ್ಳುವುದು ತೀರಾ ಅಪರೂಪ. ಅದರಲ್ಲೂ ಅಂದಿನ ದುಬಾರಿ