ಸಿನಿಮಾ
ಇತಿಹಾಸ - ಮಾಹಿತಿ - ಮನರಂಜನೆ

‘ಗಂಧರ್ವಗಿರಿ’ ಮುಹೂರ್ತ

ಪೋಸ್ಟ್ ಶೇರ್ ಮಾಡಿ

`ಶಂಕರಾಭರಣಂ’ ತೆಲುಗು ಸಿನಿಮಾ ಖ್ಯಾತಿಯ ನಟ ಸೋಮಯಾಜುಲು ಮುಖ್ಯಪಾತ್ರದಲ್ಲಿ ನಟಿಸಿದ್ದ `ಗಂಧರ್ವಗಿರಿ’ (1983) ಮುಹೂರ್ತದ ಸಂದರ್ಭವಿದು. ಚನ್ನರಾಯಪಟ್ಟಣ ಸಮೀಪದ ನುಗ್ಗೇಹಳ್ಳಿಯ ಹೊಯ್ಸಳ ದೇವಾಲಯದಲ್ಲಿ ಆರಂಭವಾದ ಚಿತ್ರಕ್ಕೆ ಆಗ ಸಚಿವರಾಗಿದ್ದ ಎಚ್.ಎಸ್.ಶ್ರೀಕಂಠಯ್ಯ ಕ್ಲ್ಯಾಪ್ ಮಾಡಿದ್ದರು. ಸಾಯಿಸುತೆ ಅವರ ಕೃತಿಯನ್ನು ಆಧರಿಸಿ ಅದೇ ಶೀರ್ಷಿಕೆಯಡಿ ತಯಾರಾದ ಸಿನಿಮಾ `ಗಂಧರ್ವಗಿರಿ’. ವಿಷ್ಣುವರ್ಧನ್ ಹೀರೋ ಆಗಿದ್ದ ಚಿತ್ರದಲ್ಲಿ ಸೋಮಯಾಜುಲು ಅವರು ನಾಯಕನಟಿ ಆರತಿ ತಂದೆಯಾಗಿ ಅಭಿನಯಿಸಿದ್ದಾರೆ. ಆರತಿ ಸಹೋದರರಾದ ಮುಕುಂದ ಮತ್ತು ಧನಂಜಯ ಚಿತ್ರದ ನಿರ್ಮಾಪಕರು. ಪುಟ್ಟಣ್ಣ ಕಣಗಾಲ್ ಅವರೊಂದಿಗೆ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದ ದತ್ತು (ಧನಂಜಯ) `ಗಂಧರ್ವಗಿರಿ’ ನಿರ್ದೇಶಕ.

ಕೆ.ವಿಶ್ವನಾಥ್ ನಿರ್ದೇಶನದ `ಶಂಕರಾಭರಣಂ’ (1980) ತೆಲುಗು ಚಿತ್ರರಂಗದಲ್ಲಿ ಮೈಲುಗಲ್ಲು ಎನಿಸಿಕೊಂಡ ಸಿನಿಮಾ. ಅತ್ಯುತ್ತಮ ಸಿನಿಮಾ, ಅತ್ಯುತ್ತಮ ಸಂಗೀತ (ಕೆ.ವಿ.ಮಹದೇವನ್), ಅತ್ಯುತ್ತಮ ಗಾಯಕ (ಎಸ್‍ಪಿಬಿ), ಅತ್ಯುತ್ತಮ ಗಾಯಕಿ (ವಾಣಿ ಜಯರಾಂ) ರಾಷ್ಟ್ರಪ್ರಶಸ್ತಿಗಳಿಗೆ ಚಿತ್ರ ಭಾಜನವಾಗಿತ್ತು. ಅತ್ಯುತ್ತಮ ಪಾತ್ರಪೋಷಣೆಗಾಗಿ ಸೋಮಯಾಜುಲು ಅವರಿಗೆ ಫಿಲ್ಮ್‍ಫೇರ್ ಪ್ರಶಸ್ತಿ ಸಂದಿತ್ತು.

ಇನ್ನಷ್ಟು ಕಥೆ

ಹೆಳವನಕಟ್ಟೆ ಗಿರಿಯಮ್ಮ

ಸಂಕೇತ್ ಸ್ಟುಡಿಯೋದಲ್ಲಿ ‘ಹೆಳವನಕಟ್ಟೆ ಗಿರಿಯಮ್ಮ’ ಚಿತ್ರದ ಹಾಡಿನ ಧ್ವನಿಮುದ್ರಣ ಸಂದರ್ಭ. ಪಿಬಿಎಸ್ ಜೊತೆ

ಜನಪ್ರಿಯ ಪೋಸ್ಟ್ ಗಳು

‘ಬಿಳಿ ಹೆಂಡ್ತಿ’ ಮಾರ್ಗರೆಟ್

ಅಮೆರಿಕ ಮೂಲದ ಮಾರ್ಗರೆಟ್ ಥಾಮ್ಸನ್ ‘ಬಿಳಿ ಹೆಂಡ್ತಿ’ ಚಿತ್ರಕ್ಕೆ ಆಯ್ಕೆಯಾದದ್ದು ಆಕಸ್ಮಿಕ. ಹದಿನೆಂಟರ ಹರೆಯದ ಮಾರ್ಗರೆಟ್ ಆಗ ‘ಭಾರತದ ಗ್ರಾಮೀಣ

ಕಲೋಪಾಸಕರು – ಪತ್ರಕರ್ತ ಹಾ.ವೆಂ.ಸೀತಾರಾಮಯ್ಯ ನೆನಪು

ಈ ಫೋಟೋದಲ್ಲಿ ನಟ ಅಶ್ವತ್ಥ್ ಅವರೊಂದಿಗಿರುವವರು ಪತ್ರಕರ್ತ ಹಾ.ವೆಂ.ಸೀತಾರಾಮಯ್ಯನವರು. ವೃತ್ತಿಯ ಬಹುಪಾಲು ಅವಧಿ ಕನ್ನಡಪ್ರಭ ದಿನಪತ್ರಿಕೆಯಲ್ಲಿ ಕಾರ್ಯನಿರ್ವಹಣೆ. ರಂಗಭೂಮಿ ಮತ್ತು

‘ಗಂಧರ್ವಗಿರಿ’ ಮುಹೂರ್ತ

`ಶಂಕರಾಭರಣಂ’ ತೆಲುಗು ಸಿನಿಮಾ ಖ್ಯಾತಿಯ ನಟ ಸೋಮಯಾಜುಲು ಮುಖ್ಯಪಾತ್ರದಲ್ಲಿ ನಟಿಸಿದ್ದ `ಗಂಧರ್ವಗಿರಿ’ (1983) ಮುಹೂರ್ತದ ಸಂದರ್ಭವಿದು. ಚನ್ನರಾಯಪಟ್ಟಣ ಸಮೀಪದ ನುಗ್ಗೇಹಳ್ಳಿಯ

ರಾಜ್‌ ಅವರಿಗೆ ಕಲರ್ ಷರ್ಟ್ ಹಾಕಿಸಿದ್ದು!

ಸ್ಥಿರಚಿತ್ರ ಛಾಯಾಗ್ರಾಹಕ ಪ್ರಗತಿ ಅಶ್ವತ್ಥ ನಾರಾಯಣ ಅವರು ಸಿನಿ ಪತ್ರಿಕೆಗಳಿಗೂ ಕಾರ್ಯನಿರ್ವಹಿಸಿದ್ದಾರೆ. ವಿ.ಎನ್.ಸುಬ್ಬರಾವ್ ಸಂಪಾದಕತ್ವದ `ತಾರಾಲೋಕ’ ಪತ್ರಿಕೆಯ ಸಂದರ್ಭವೊಂದು ಅವರ