ಸಿನಿಮಾ - ರಂಗಭೂಮಿ
ಇತಿಹಾಸ - ಮಾಹಿತಿ - ಮನರಂಜನೆ

ಸಿಹಿ ತಿನ್ನಿಸಿ, ಇದು ಎಲ್ಲರಿಗೂ ಸಂದ ಗೌರವ ಎಂದರು

Share this post

1995ರಲ್ಲಿ ಡಾ.ರಾಜಕುಮಾರ್ ಅವರಿಗೆ ಫಾಲ್ಕೆ ಪ್ರಶಸ್ತಿ ಘೋಷಣೆಯಾದ ಸಂದರ್ಭ. ಕರ್ನಾಟಕ ಚಲನಚಿತ್ರ ಸ್ಥಿರಚಿತ್ರ ಛಾಯಾಗ್ರಾಹಕರ ಸಂಘದ ವತಿಯಿಂದ ವರನಟನಿಗೆ ಅವರ ಮನೆಯಲ್ಲೇ ಸನ್ಮಾನಿಸಲು ತೀರ್ಮಾನಿಸಲಾಯಿತು. ಆಗ ಪ್ರಗತಿ ಅಶ್ವತ್ಥ ನಾರಾಯಣ ಅವರು ಸಂಘದ ಅಧ್ಯಕ್ಷರಾಗಿದ್ದರು. ಸದಾಶಿವನಗರದ ಮನೆಗೆ ಹೋದಾಗ ರಾಜ್ ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ. ಸನ್ಮಾನದ ವಿಷಯ ಕೇಳಿ ಅವರಿಗೆ ಮುಜುಗರವಾಯ್ತಂತೆ.

ಆ ಸಂದರ್ಭಕ್ಕೆ ಸಾಕ್ಷಿಯಾದ ಸ್ಥಿರಚಿತ್ರ ಛಾಯಾಗ್ರಾಹಕ ಪ್ರಗತಿ ಅಶ್ವತ್ಥರು ಹೇಳುವುದು ಹೀಗೆ – “ರಾಜಕುಮಾರ್ ತುಂಬಾ ಭಾವುಕರಾದರು. ನೀವೆಲ್ಲರೂ ನನ್ನ ಸಹೋದ್ಯೋಗಿಗಳು. ಇದು ನಿಮ್ಮೆಲ್ಲರಿಗೂ ಸಲ್ಲಬೇಕಾದ ಗೌರವ. ನೀವು ನನಗೆ ಸನ್ಮಾನ ಮಾಡಬೇಕೆ? ನನ್ನ ಈ ಬೆಳವಣಿಗೆಯಲ್ಲಿ ನಿಮ್ಮೆಲ್ಲರ ಕಾಣ್ಕೆ ಇದೆ ಎಂದರು. ಆನಂತರ ಆಗಷ್ಟೇ ಕಣ್ಣು ತೆರೆಯುತ್ತಿದ್ದ ಡಿಜಿಟಲ್‌ ಫೋಟೋಗ್ರಫಿ, ಹಿಂದಿನ ಛಾಯಾಗ್ರಾಹಕರು ಪಡುತ್ತಿದ್ದ ಕಷ್ಟಗಳನ್ನು ನೆನಪು ಮಾಡಿಕೂಂಡರು. ಈ ಮಾತುಕತೆ ಎಲ್ಲವನ್ನೂ ನಾವು ವೀಡಿಯೋ ಮಾಡಿಕೊಂಡೆವು. ಚರ್ಚೆ ಬಹಳ ಸ್ವಾರಸ್ಯಕರವಾಗಿತ್ತು. ನಂತರ ಸದಸ್ಯರೆಲ್ಲರೂ ಪ್ರತ್ಯೇಕವಾಗಿ ಅವರೊಂದಿಗೆ ಪೋಟೋ ತೆಗೆದುಕೊಂಡು ಮತ್ತೊಮ್ಮೆ ಅಭಿನಂದನೆ ತಿಳಿಸಿ ವಾಪಸಾದೆವು”

ಮಾಹಿತಿ - ವಿಶೇಷ - ಇತರೆ ಹಿನ್ನೋಟ

ನಟಿ ಸುಬ್ಬಲಕ್ಷ್ಮಿ

ಖ್ಯಾತ ಶಾಸ್ತ್ರೀಯ ಸಂಗೀತಗಾರ್ತಿ, ಭಾರತರತ್ನ ಎಂ.ಎಸ್.ಸುಬ್ಬಲಕ್ಷ್ಮಿ ಸಿನಿಮಾ ನಟಿ ಎನ್ನುವ ವಿಚಾರ ಬಹಳಷ್ಟು

ಧರ್ಮಸೆರೆ – ಪುಟ್ಟಣ್ಣ

‘ಧರ್ಮಸೆರೆ’ (1979) ಚಿತ್ರಕ್ಕೆ ಕುಂದಾಪುರ ಸಮೀಪ ಸಮುದ್ರದ ಹಿನ್ನೀರಿನಲ್ಲಿ ಚಿತ್ರೀಕರಣ ನಡೆಸಲಾಗಿತ್ತು. ನಿರ್ದೇಶಕ ಪುಟ್ಟಣ್ಣನವರು ಬೋಟ್‍ವೊಂದನ್ನು ಟ್ರ್ಯಾಲಿಯಂತೆ ಬಳಕೆ ಮಾಡಿ

ಸಾಹಸಿ ನಿರ್ಮಾಪಕ ಬಿ.ಎಸ್.ರಂಗಾ

ಸಿನಿಮಾ ಛಾಯಾಗ್ರಾಹಕ, ನಿರ್ದೇಶಕ, ನಿರ್ಮಾಪಕರಾಗಿ ಕನ್ನಡಿಗ ಬಿ.ಎಸ್.ರಂಗಾ ದಕ್ಷಿಣ ಭಾರತ ಚಿತ್ರರಂಗದಲ್ಲಿ ದೊಡ್ಡ ಹೆಸರು. ಕನ್ನಡದಲ್ಲಿ ಸಿನಿಮಾಗಳ ನಿರ್ಮಾಣವೇ ಕಷ್ಟವಾಗಿದ್ದ

ಒಂದಾನೊಂದು ಕಾಲದಲ್ಲಿ

ಗಿರೀಶ್ ಕಾರ್ನಾಡ್ ನಿರ್ದೇಶನದ ‘ಒಂದಾನೊಂದು ಕಾಲದಲ್ಲಿ’ (1978) ಚಿತ್ರದಲ್ಲಿ ಶಂಕರ್‌ ನಾಗ್‌. ಕನ್ನಡ ಚಿತ್ರರಂಗ ಮಾತ್ರವಲ್ಲ ಭಾರತೀಯ ಸಿನಿಮಾ ಸಂದರ್ಭದಲ್ಲೇ

ಆರ್‌ಎನ್‌ಜೆ – ಎಲ್‌ಪಿ

ಕನ್ನಡದಲ್ಲಿ ಗೀತರಚನೆಕಾರರೊಬ್ಬರ ಮೊದಲ ಎಲ್.ಪಿ ಬಿಡುಗಡೆ ಆಗಿದ್ದು ಆರ್.ಎನ್.ಜಯ ಗೋಪಾಲ್ ಅವರದ್ದು. ಅದರ ಬಿಡುಗಡೆ ಕಾರ್ಯಕ್ರಮದ ಚಿತ್ರವಿದು. ನರಸಿಂಹನ್, ನಟ