ಸಿನಿಮಾ
ಇತಿಹಾಸ - ಮಾಹಿತಿ - ಮನರಂಜನೆ

ವೀರಾಸ್ವಾಮಿ

ಚಿತ್ರನಿರ್ಮಾಪಕ
ಪೋಸ್ಟ್ ಶೇರ್ ಮಾಡಿ

ಉತ್ತರ ಭಾರತದ ವ್ಯಕ್ತಿಯೊಬ್ಬರು ಬೆಂಗಳೂರಿನಲ್ಲಿ `ಡ್ರೀಮ್‍ಲ್ಯಾಂಡ್’ ಸಿನಿಮಾ ಹಂಚಿಕೆ ಕಚೇರಿ ನಡೆಸುತ್ತಿದ್ದರು. ಅವರಲ್ಲಿ ಸಾಮಾನ್ಯ ನೌಕರನಾಗಿ ಕೆಲಸಕ್ಕೆ ಸೇರಿದ ವೀರಾಸ್ವಾಮಿ ಸ್ವಂತ ಪರಿಶ್ರಮದಿಂದ ಎತ್ತರಕ್ಕೆ ಬೆಳೆದ ಸಾಧಕ. ಕಾರಣಾಂತರಗಳಿಂದ ಚಿತ್ರ ಹಂಚಿಕೆ ಸಂಸ್ಥೆಯನ್ನು ಮುಚ್ಚುವ ಸಂದರ್ಭ ಎದುರಾಯ್ತು. ಆಗ ಉತ್ತರ ಭಾರತ ಮೂಲದ ಮಾಲೀಕರು ತಮ್ಮ ಸಂಸ್ಥೆಯನ್ನು ವೀರಾಸ್ವಾಮಿ ಉಸ್ತುವಾರಿಗೆ ಬಿಟ್ಟು ಹೋದರು. ಮುಂದೆ ವೀರಾಸ್ವಾಮಿಯವರು ಈ ಸಂಸ್ಥೆಗೆ `ಈಶ್ವರಿ ಪಿಕ್ಚರ್ಸ್’ ಎಂದು ಮರುನಾಮಕರಣ ಮಾಡಿ ಚಿತ್ರಹಂಚಿಕೆ ಆರಂಭಿಸಿದರು.

ಅಪಾರ ಸಿನಿಮಾ ಪ್ರೀತಿ, ಆತ್ಮವಿಶ್ವಾಸ, ಮುನ್ನೋಟವಿದ್ದ ವೀರಾಸ್ವಾಮಿ ಆನಂತರ ಹಿಂತಿರುಗಿ ನೋಡಿದ್ದೇ ಇಲ್ಲ. ಚಿತ್ರನಿರ್ಮಾಣ, ವಿತರಣೆ, ಹಂಚಿಕೆ ಕ್ಷೇತ್ರದಲ್ಲಿ ದೊಡ್ಡ ಹೆಸರು ಮಾಡಿದರು. ಆ ಮಟ್ಟಿಗೆ ಕನ್ನಡ ಚಿತ್ರರಂಗದ ಬೆಳವಣಿಗೆಯ ಹಾದಿಯಲ್ಲಿ ಅವರದು ದೊಡ್ಡ ಕೊಡುಗೆ. ಕುಲಗೌರವ, ನಾಗರಹಾವು, ನಾ ನಿನ್ನ ಮರೆಯಲಾರೆ, ನಾರಿ ಸ್ವರ್ಗಕ್ಕೆ ದಾರಿ…. ಸಹನಿರ್ಮಾಣದಲ್ಲಿ ತಯಾರಾದ ಬೂತಯ್ಯನ ಮಗ ಅಯ್ಯು, ಹೇಮಾವತಿ, ಭೂಲೋಕದಲ್ಲಿ ಯಮರಾಜ, ನಾರದವಿಜಯ… ಹೀಗೆ ವೀರಾಸ್ವಾಮಿ ಸಂಸ್ಥೆಯಡಿ ಹಲವಾರು ಪ್ರಮುಖ ಚಿತ್ರಗಳು ತಯಾರಾಗಿವೆ. ಕನ್ನಡ ಚಿತ್ರರಂಗಕ್ಕೆ ಅದ್ಧೂರಿತನ ಪರಿಚಯಿಸಿದ ವೀರಾಸ್ವಾಮಿ ತಮ್ಮ ಪುತ್ರನಿಗಾಗಿ ಚಕ್ರವ್ಯೂಹ, ಪ್ರೇಮಲೋಕ, ರಣಧೀರ, ಶಾಂತಿ ಕ್ರಾಂತಿ ಮತ್ತಿತರ ಸಿನಿಮಾಗಳನ್ನು ನಿರ್ಮಿಸಿದರು. ಮುಂದೆ ತಂದೆ ಹಾಕಿಕೊಟ್ಟ ಮೇಲ್ಪಂಕ್ತಿಯಲ್ಲಿ ಸಾಗಿದ ರವಿಚಂದ್ರನ್ ಅವರದ್ದು ಮತ್ತೊಂದು ಯಶೋಗಾಥೆ. 1992, ಆಗಸ್ಟ್‌ 23ರಂದು  ವೀರಾಸ್ವಾಮಿ ಅಗಲಿದರು.

ಸಮಾರಂಭವೊಂದರಲ್ಲಿ ಅಪ್ಪ ವೀರಾಸ್ವಾಮಿ, ಅಮ್ಮ ಪಟ್ಟಮ್ಮಾಳ್ ಜೊತೆ ಟೀನೇಜ್ ರವಿಚಂದ್ರನ್

ನೆನಪು ಸಾಧನೆ - ಸ್ಫೂರ್ತಿ

ಅಪರೂಪದ ಸಾಧಕ ವೀರಾಸ್ವಾಮಿ

ಉತ್ತರ ಭಾರತದ ವ್ಯಕ್ತಿಯೊಬ್ಬರು ಬೆಂಗಳೂರಿನಲ್ಲಿ `ಡ್ರೀಮ್‍ಲ್ಯಾಂಡ್’ ಸಿನಿಮಾ ಹಂಚಿಕೆ ಕಚೇರಿ ನಡೆಸುತ್ತಿದ್ದರು. ಅವರಲ್ಲಿ

ಮಹಾನಟಿ ಮನೋರಮ

‘ಮಾಳಯಿಟ್ಟ ಮಂಗೈ’ (1958) ತಮಿಳು ಚಿತ್ರದೊಂದಿಗೆ ಮನೋರಮ ಬೆಳ್ಳಿತೆರೆಗೆ ಪದಾರ್ಪಣೆ ಮಾಡಿದರು. 1985ರಲ್ಲಿ

ಜನಪ್ರಿಯ ಪೋಸ್ಟ್ ಗಳು

ಪ್ರತಿಮಾದೇವಿ

ಕನ್ನಡ ಚಿತ್ರರಂಗದ ಆರಂಭದ ದಿನಗಳ ನಾಯಕನಟಿ ಪ್ರತಿಮಾದೇವಿ. ಹುಟ್ಟೂರು ಉಡುಪಿ. ಅವರ ಜನ್ಮನಾಮ ಮೋಹಿನಿ. ಅಭಿನಯ ಶುರು ಮಾಡಿದ್ದು ನಾಟಕಗಳಲ್ಲಿ.

ಮೇರು ತಾರೆ ದಿಲೀಪ್ ಕುಮಾರ್

ಹಿಂದಿ ಚಿತ್ರರಂಗದ ಮೇರು ನಟ ದಿಲೀಪ್ ಕುಮಾರ್ ಹುಟ್ಟಿದ್ದು ಪೇಶಾವರದಲ್ಲಿ (ಈಗಿನ ಪಾಕಿಸ್ತಾನ) 1922, ಡಿಸೆಂಬರ್ 11ರಂದು. ಜನ್ಮನಾಮ ಮೊಹಮ್ಮದ್

ಕನ್ನಡಕ್ಕೊಬ್ಬರೇ ಬಾಲಣ್ಣ

ಬಾಲಣ್ಣ ತೀರಿಹೋಗಿ 26 ವರ್ಷ ಆಗಿದ್ದರೂ ಅವರಿಗೆ ಅವರ ಪಾತ್ರಗಳಿಗೆ ಸರಿಸಾಟಿ ಯಾರಿದ್ದಾರೆ? ಬಾಲಣ್ಣನವರಿಗೆ ಸರಿಸಾಟಿಯಾಗಿ ನಿಲ್ಲುವವರು ಬಾಲಣ್ಣನವರು ಮಾತ್ರ.

ಎಂ.ವಿ.ವಾಸುದೇವರಾವ್

‘ಚೋಮನದುಡಿ’ ಚಿತ್ರದಲ್ಲಿನ ‘ಚೋಮ’ನ ಪಾತ್ರದ ಅತ್ಯುತ್ತಮ ನಟನೆಗೆ ಕನ್ನಡಕ್ಕೆ ಮೊದಲ ‘ಅತ್ಯುತ್ತಮ ನಟ’ ರಾಷ್ಟ್ರಪ್ರಶಸ್ತಿ ತಂದುಕೊಟ್ಟವರು ವಾಸುದೇವರಾವ್‌. ಬಾಲನಟನಾಗಿ ವೃತ್ತಿರಂಗಭೂಮಿಗೆ