ಸಿನಿಮಾ - ರಂಗಭೂಮಿ
ಇತಿಹಾಸ - ಮಾಹಿತಿ - ಮನರಂಜನೆ

ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ‘ಪಲಿತಾಂಶ’

Share this post

(ಬರಹ : ಪ್ರಗತಿ ಅಶ್ವತ್ಥ ನಾರಾಯಣ, ಹಿರಿಯ ಸಿನಿಮಾ ಸ್ಥಿರಚಿತ್ರ ಛಾಯಾಗ್ರಾಹಕರು)

1976ರಲ್ಲಿ ಬಿಡುಗಡೆಯಾದ ಪುಟ್ಟಣ್ಣ ಕಣಗಾಲ್ ನಿರ್ದೇಶನದ ‘ಪಲಿತಾಂಶ’ ಚಿತ್ರದ ಕೆಲವು ಸನ್ನಿವೇಶಗಳನ್ನು ಬೆಂಗಳೂರು ಚಾಮುಂಡೇಶ್ವರಿ ಸ್ಟೂಡಿಯೋದಲ್ಲಿ ಚಿತ್ರಿಸಲಾಗಿತ್ತು. ಈ ಚಿತ್ರದಲ್ಲಿ ಹಿಂದಿ ಚಿತ್ರರಂಗದ ಹೆಸರಾಂತ ನಟ ಅಮರೀಶ್ ಪುರಿ ಒಂದು ಪ್ರಮುಖ ಪಾತ್ರ ನಿರ್ವಹಿಸಿದ್ದರು.

ಶೂಟಿಂಗ್ ಬಿಡುವಿನ ವೇಳೆಯಲ್ಲಿ ಸೆರೆಹಿಡಿದ ಈ ಫೋಟೋದಲ್ಲಿ ಕಲಾ ನಿರ್ದೇಶಕ ಚಲಂ, ನಟರಾದ ಅಮರೀಶ್ ಪುರಿ, ಜೈಜಗದೀಶ್, ಚಿತ್ರದ ನಿರ್ಮಾಪಕ ಮುಕುಂದ್ ಇದ್ದಾರೆ. ಮುಕುಂದ್‌ ಅವರು ನಟಿ ಆರತಿಯವರ ಹಿರಿಯ ಸಹೋದರ. ಇದು ನಟ ಜೈಜಗದೀಶ್ ಅವರ ಪ್ರಥಮ ಚಿತ್ರ.

ಬಿಜಾಪುರದ ಪ್ರಖ್ಯಾತ ಗೋಲ್‌ಗುಂಬಜ್‌ನ ಮೇಲು ಭಾಗದ ಸೆಟ್‌ ಹಾಕಿ ಚಿತ್ರದ ಕ್ಲೈಮ್ಯಾಕ್ಸ್‌ ದೃಶ್ಯಗಳನ್ನು ಚಿತ್ರೀಕರಣ ಮಾಡಲಾಗಿತ್ತು. ಕನ್ನಡಿಗಳನ್ನು ಅಳವಡಿಸಿದ್ದ ಬಿಜಾಪುರ ಸುಲ್ತಾನರ ಅರಮನೆಯ ಸೆಟ್‌ನಲ್ಲಿ ನೃತ್ಯದ ಸನ್ನಿವೇಶಗಳನ್ನು ಚಿತ್ರಿಸಲಾಗಿತ್ತು. ಹಿಂದಿ ನಟಿ ಅರುಣಾ ಇರಾನಿ ನಟಿಸಿದ್ದರು. ಈ ಸಿನಿಮಾ ನಿರೀಕ್ಷಿತ ಗೆಲುವು ದಾಖಲಿಸಲಿಲ್ಲ. ದುರದೃಷ್ಟವತಾಶ್‌ ಚಿತ್ರದ ಪ್ರತಿಯೂ ಇಲ್ಲ. ಟಿವಿಯಲ್ಲಿ ಸಹ ಚಿತ್ರ ನೋಡಲು ಸಾದ್ಯವಾಗುತ್ತಿಲ್ಲ.

ಮಾಹಿತಿ - ವಿಶೇಷ - ಇತರೆ ಹಿನ್ನೋಟ

ನಟಿ ಸುಬ್ಬಲಕ್ಷ್ಮಿ

ಖ್ಯಾತ ಶಾಸ್ತ್ರೀಯ ಸಂಗೀತಗಾರ್ತಿ, ಭಾರತರತ್ನ ಎಂ.ಎಸ್.ಸುಬ್ಬಲಕ್ಷ್ಮಿ ಸಿನಿಮಾ ನಟಿ ಎನ್ನುವ ವಿಚಾರ ಬಹಳಷ್ಟು

ಧರ್ಮಸೆರೆ – ಪುಟ್ಟಣ್ಣ

‘ಧರ್ಮಸೆರೆ’ (1979) ಚಿತ್ರಕ್ಕೆ ಕುಂದಾಪುರ ಸಮೀಪ ಸಮುದ್ರದ ಹಿನ್ನೀರಿನಲ್ಲಿ ಚಿತ್ರೀಕರಣ ನಡೆಸಲಾಗಿತ್ತು. ನಿರ್ದೇಶಕ ಪುಟ್ಟಣ್ಣನವರು ಬೋಟ್‍ವೊಂದನ್ನು ಟ್ರ್ಯಾಲಿಯಂತೆ ಬಳಕೆ ಮಾಡಿ

ಸಾಹಸಿ ನಿರ್ಮಾಪಕ ಬಿ.ಎಸ್.ರಂಗಾ

ಸಿನಿಮಾ ಛಾಯಾಗ್ರಾಹಕ, ನಿರ್ದೇಶಕ, ನಿರ್ಮಾಪಕರಾಗಿ ಕನ್ನಡಿಗ ಬಿ.ಎಸ್.ರಂಗಾ ದಕ್ಷಿಣ ಭಾರತ ಚಿತ್ರರಂಗದಲ್ಲಿ ದೊಡ್ಡ ಹೆಸರು. ಕನ್ನಡದಲ್ಲಿ ಸಿನಿಮಾಗಳ ನಿರ್ಮಾಣವೇ ಕಷ್ಟವಾಗಿದ್ದ

ಒಂದಾನೊಂದು ಕಾಲದಲ್ಲಿ

ಗಿರೀಶ್ ಕಾರ್ನಾಡ್ ನಿರ್ದೇಶನದ ‘ಒಂದಾನೊಂದು ಕಾಲದಲ್ಲಿ’ (1978) ಚಿತ್ರದಲ್ಲಿ ಶಂಕರ್‌ ನಾಗ್‌. ಕನ್ನಡ ಚಿತ್ರರಂಗ ಮಾತ್ರವಲ್ಲ ಭಾರತೀಯ ಸಿನಿಮಾ ಸಂದರ್ಭದಲ್ಲೇ

ಆರ್‌ಎನ್‌ಜೆ – ಎಲ್‌ಪಿ

ಕನ್ನಡದಲ್ಲಿ ಗೀತರಚನೆಕಾರರೊಬ್ಬರ ಮೊದಲ ಎಲ್.ಪಿ ಬಿಡುಗಡೆ ಆಗಿದ್ದು ಆರ್.ಎನ್.ಜಯ ಗೋಪಾಲ್ ಅವರದ್ದು. ಅದರ ಬಿಡುಗಡೆ ಕಾರ್ಯಕ್ರಮದ ಚಿತ್ರವಿದು. ನರಸಿಂಹನ್, ನಟ