ಸಿನಿಮಾ
ಇತಿಹಾಸ - ಮಾಹಿತಿ - ಮನರಂಜನೆ

ಚಿತ್ರರಂಗಕ್ಕೆ ಆಸರೆಯಾದ ಅರಸು

ಪೋಸ್ಟ್ ಶೇರ್ ಮಾಡಿ

ಮೈಸೂರು ಅರಸು ಕುಟುಂಬದವರು ಕೆಂಪರಾಜ ಅರಸ್. ಕರ್ನಾಟಕದ ಮುಖ್ಯಮಂತ್ರಿಗಳಾಗಿದ್ದ ಡಿ.ದೇವರಾಜ ಅರಸು ಅವರ ಸಹೋದರ. ಗುಬ್ಬಿ ವೀರಣ್ಣನವರು ನಿರ್ಮಿಸಿದ  `ಜೀವನ ನಾಟಕ’ (1942) ಚಿತ್ರದೊಂದಿಗೆ ಕೆಂಪರಾಜ ಅರಸು ಬೆಳ್ಳಿತೆರೆಗೆ ಪದಾರ್ಪಣೆ ಮಾಡಿದರು. `ಭಕ್ತ ರಾಮದಾಸ್’ (1948) ಚಿತ್ರದೊಂದಿಗೆ ನಿರ್ದೇಶಕರಾದ ಅವರಿಗೆ `ರಾಜಾವಿಕ್ರಮ’ (1951) ಚಿತ್ರದ ಪಾತ್ರ ಹೆಸರು ತಂದುಕೊಟ್ಟಿತು. ಇದು ಅವರ ನಿರ್ಮಾಣ ಸಂಸ್ಥೆಯಡಿ ತಯಾರಾದ ಚಿತ್ರವೂ ಹೌದು.

ಮುಂದೆ `ಜಲದುರ್ಗ’, `ನಳ ದಮಯಂತಿ’ ಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸಿ, ನಟಿಸಿದರು. `ಜಲದುರ್ಗ’, ಫ್ರೆಂಚ್ ಕಾದಂಬರಿ `ಕೌಂಟ್ ಆಫ್ ಮಾಂಟ್‍ಕ್ರಸ್ಟೋ’ ಆಧರಿಸಿದ ಸಿನಿಮಾ. `ಕೃಷ್ಣಲೀಲಾ’, `ಮಹಾನಂದ’ ಅರಸರ ಇತರ ಪ್ರಮುಖ ಚಿತ್ರಗಳು. ಕರ್ನಾಟಕ ಚಲನಚಿತ್ರ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಉತ್ತಮ ಅಭಿವೃದ್ಧಿ ಕಾರ್ಯಕ್ರಮಗಳೊಂದಿಗೆ ಕನ್ನಡ ಚಿತ್ರರಂಗಕ್ಕೆ ಸೇವೆ ಸಲ್ಲಿಸಿದ್ದಾರೆ.

ಕೆಂಪರಾಜ ಅರಸ್‌ | ಜನನ: 05/02/1917 | ನಿಧನ: 18/05/1982)

‘ರಾಜಾವಿಕ್ರಮ’ (1951) ಚಿತ್ರದಲ್ಲಿ ಎಂ.ವಿ.ರಾಜಮ್ಮ ಮತ್ತು ಕೆಂಪರಾಜ ಅರಸ್. ಕನ್ನಡ ಮತ್ತು ತಮಿಳು ಎರಡೂ ಭಾಷೆಗಳಲ್ಲಿ ತಯಾರಾದ ಈ ಚಿತ್ರವನ್ನು ಕೆಂಪರಾಜ ಅರಸ್‌ ಅವರು ನಿರ್ಮಿಸಿ, ನಿರ್ದೇಶಿಸಿದ್ದಾರೆ.

ನೆನಪು ಸಾಧನೆ - ಸ್ಫೂರ್ತಿ

ಅಪರೂಪದ ಸಾಧಕ ವೀರಾಸ್ವಾಮಿ

ಉತ್ತರ ಭಾರತದ ವ್ಯಕ್ತಿಯೊಬ್ಬರು ಬೆಂಗಳೂರಿನಲ್ಲಿ `ಡ್ರೀಮ್‍ಲ್ಯಾಂಡ್’ ಸಿನಿಮಾ ಹಂಚಿಕೆ ಕಚೇರಿ ನಡೆಸುತ್ತಿದ್ದರು. ಅವರಲ್ಲಿ

ಮಹಾನಟಿ ಮನೋರಮ

‘ಮಾಳಯಿಟ್ಟ ಮಂಗೈ’ (1958) ತಮಿಳು ಚಿತ್ರದೊಂದಿಗೆ ಮನೋರಮ ಬೆಳ್ಳಿತೆರೆಗೆ ಪದಾರ್ಪಣೆ ಮಾಡಿದರು. 1985ರಲ್ಲಿ

ಜನಪ್ರಿಯ ಪೋಸ್ಟ್ ಗಳು

‘ಜ್ಯುಬಿಲಿ ಸ್ಟಾರ್’ ರಾಜೇಂದ್ರ ಕುಮಾರ್

ಬೆಳ್ಳಿತೆರೆಗೆ ಪರಿಚಯವಾದ ಆರಂಭದ ದಿನಗಳಲ್ಲಿ ರಾಜೇಂದ್ರಕುಮಾರ್ ತೀವ್ರ ಹಿನ್ನೆಡೆ ಅನುಭವಿಸಿದ್ದರು. ಅನಿರೀಕ್ಷಿತ ಬೆಳವಣಿಗೆಯಲ್ಲಿ ಅವರ ಸಾಲು, ಸಾಲು ಚಿತ್ರಗಳು ಯಶಸ್ವಿಯಾದವು.

ರಾಜ್ – ಕಂಡದ್ದು ಆರು ಸಲ…

ನನಗೆ ರಾಜ್ ಮೇಲಿದ್ದ ಅಭಿಮಾನದ ಹಿಂದಿನ ತರ್ಕವೇನೂ ತಿಳಿಯದು. ಆದರೆ ಅವರನ್ನು, ಅವರ ಚಿತ್ರಗಳನ್ನು ಆರಾಧಿಸಿದ್ದು ಸತ್ಯ.ಒಮ್ಮೆ ಈ ರಾಜಕುಮಾರ