ಸಿನಿಮಾ - ರಂಗಭೂಮಿ
ಇತಿಹಾಸ - ಮಾಹಿತಿ - ಮನರಂಜನೆ

ಚಿತ್ರರಂಗಕ್ಕೆ ಆಸರೆಯಾದ ಅರಸು

ಪೋಸ್ಟ್ ಶೇರ್ ಮಾಡಿ

ಮೈಸೂರು ಅರಸು ಕುಟುಂಬದವರು ಕೆಂಪರಾಜ ಅರಸ್. ಕರ್ನಾಟಕದ ಮುಖ್ಯಮಂತ್ರಿಗಳಾಗಿದ್ದ ಡಿ.ದೇವರಾಜ ಅರಸು ಅವರ ಸಹೋದರ. ಗುಬ್ಬಿ ವೀರಣ್ಣನವರು ನಿರ್ಮಿಸಿದ  `ಜೀವನ ನಾಟಕ’ (1942) ಚಿತ್ರದೊಂದಿಗೆ ಕೆಂಪರಾಜ ಅರಸು ಬೆಳ್ಳಿತೆರೆಗೆ ಪದಾರ್ಪಣೆ ಮಾಡಿದರು. `ಭಕ್ತ ರಾಮದಾಸ್’ (1948) ಚಿತ್ರದೊಂದಿಗೆ ನಿರ್ದೇಶಕರಾದ ಅವರಿಗೆ `ರಾಜಾವಿಕ್ರಮ’ (1951) ಚಿತ್ರದ ಪಾತ್ರ ಹೆಸರು ತಂದುಕೊಟ್ಟಿತು. ಇದು ಅವರ ನಿರ್ಮಾಣ ಸಂಸ್ಥೆಯಡಿ ತಯಾರಾದ ಚಿತ್ರವೂ ಹೌದು.

ಮುಂದೆ `ಜಲದುರ್ಗ’, `ನಳ ದಮಯಂತಿ’ ಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸಿ, ನಟಿಸಿದರು. `ಜಲದುರ್ಗ’, ಫ್ರೆಂಚ್ ಕಾದಂಬರಿ `ಕೌಂಟ್ ಆಫ್ ಮಾಂಟ್‍ಕ್ರಸ್ಟೋ’ ಆಧರಿಸಿದ ಸಿನಿಮಾ. `ಕೃಷ್ಣಲೀಲಾ’, `ಮಹಾನಂದ’ ಅರಸರ ಇತರ ಪ್ರಮುಖ ಚಿತ್ರಗಳು. ಕರ್ನಾಟಕ ಚಲನಚಿತ್ರ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಉತ್ತಮ ಅಭಿವೃದ್ಧಿ ಕಾರ್ಯಕ್ರಮಗಳೊಂದಿಗೆ ಕನ್ನಡ ಚಿತ್ರರಂಗಕ್ಕೆ ಸೇವೆ ಸಲ್ಲಿಸಿದ್ದಾರೆ.

ಕೆಂಪರಾಜ ಅರಸ್‌ | ಜನನ: 05/02/1917 | ನಿಧನ: 18/05/1982)

‘ರಾಜಾವಿಕ್ರಮ’ (1951) ಚಿತ್ರದಲ್ಲಿ ಎಂ.ವಿ.ರಾಜಮ್ಮ ಮತ್ತು ಕೆಂಪರಾಜ ಅರಸ್. ಕನ್ನಡ ಮತ್ತು ತಮಿಳು ಎರಡೂ ಭಾಷೆಗಳಲ್ಲಿ ತಯಾರಾದ ಈ ಚಿತ್ರವನ್ನು ಕೆಂಪರಾಜ ಅರಸ್‌ ಅವರು ನಿರ್ಮಿಸಿ, ನಿರ್ದೇಶಿಸಿದ್ದಾರೆ.

ನೆನಪು ಸಾಧನೆ - ಸ್ಫೂರ್ತಿ

ಜನಪ್ರಿಯ ಪೋಸ್ಟ್ ಗಳು

‘ದಾದಾ’ ಎಂದೇ ಕರೆಸಿಕೊಳ್ಳುತ್ತಿದ್ದ ನಿರ್ಮಾಣ ನಿರ್ವಾಹಕ, ನಟ ಶಿವಾಜಿ ರಾವ್

ಸಿನಿಮಾವೊಂದು ತಯಾರಾಗುವ ಪ್ರತೀ ಹಂತದಲ್ಲಿ ನಿರ್ಮಾಣ ನಿರ್ವಾಹಕನ ಪಾತ್ರ ದೊಡ್ಡದು. ಚಿತ್ರದಲ್ಲಿ ಕೆಲಸ ಮಾಡುವ ನಟ-ನಟಿಯರು ಹಾಗೂ ತಂತ್ರಜ್ಞರಿಗೆ ಚಿತ್ರೀಕರಣದ

ಸ್ವಂತಿಕೆಯ ಹರಿಕಾರ ಶಂಕರ್ ಸಿಂಗ್

(ಬರಹ: ಎನ್‌.ಎಸ್‌.ಶ್ರೀಧರಮೂರ್ತಿ, ಲೇಖಕ) ಚಿತ್ರನಿರ್ಮಾಪಕ, ನಿರ್ದೇಶಕ ಶಂಕರ್‌ ಸಿಂಗ್‌ ಅವರ ಜನ್ಮಶತಮಾನೋತ್ಸವ ಸಂದರ್ಭವಿದು (ಜನನ 15, ಆಗಸ್ಟ್ 1921). ಕನ್ನಡ