ಸಿನಿಮಾ
ಇತಿಹಾಸ - ಮಾಹಿತಿ - ಮನರಂಜನೆ

ಕೆ.ಎಸ್.ಅಶ್ವಥ್

ನಟ
ಪೋಸ್ಟ್ ಶೇರ್ ಮಾಡಿ

ಕರಗನಹಳ್ಳಿ ಸುಬ್ಬರಾಯ ಅಶ್ವಥ ನಾರಾಯಣ ಅವರು ಸಿನಿಮಾರಂಗದಲ್ಲಿ ಕೆ ಎಸ್ ಅಶ್ವಥ್‌ಎಂದೇ ಹೆಸರಾಗಿದ್ದಾರೆ. ಆರಂಭದಲ್ಲಿ ಆಕಾಶವಾಣಿ ನಾಟಕಗಳಲ್ಲಿ ಭಾಗವಹಿಸುತ್ತಿದ್ದ ಅವರು ಸಮಾನಮನಸ್ಕರು ಕಟ್ಟಿದ ‘ಹವ್ಯಾಸಿ ಕಲಾವಿದರು’ ತಂಡದ ಸಕ್ರಿಯ ಸದಸ್ಯರಾಗಿದ್ದರು. ‘ಸ್ತ್ರೀರತ್ನ’ (1955) ಚಿತ್ರದ ನಾಯಕನಾಗಿ ಬೆಳ್ಳಿತೆರೆಗೆ ಪದಾರ್ಪಣೆ ಮಾಡಿದ ಅವರಿಗೆ ಚಿತ್ರರಂಗದಲ್ಲಿ ನೆಲೆಕಂಡುಕೊಳ್ಳುವುದು ಸುಗಮವೇನೂ ಆಗಿರಲಿಲ್ಲ. ನಟನೆಯನ್ನು ನಂಬಿ ಫುಡ್‌ ಇನ್ಸ್‌ಪೆಕ್ಟರ್‌ ಸರ್ಕಾರಿ ಕೆಲಸ ಬಿಟ್ಟಿದ್ದ ಅಶ್ವಥ್‌ ಜೀವನೋಪಾಯಕ್ಕಾಗಿ ರಾಜ್ಯದೆಲ್ಲೆಡೆ ಪ್ರವಾಸ ಮಾಡಿ ನಾಟಕಗಳಲ್ಲಿ ಅಭಿನಯಿಸಿದರು.

ಕ್ರಮೇಣ ಸಿನಿಮಾಗಳಲ್ಲಿ ಅವಕಾಶ ಪಡೆಯುತ್ತಾ ಹೋದ ಅವರು ಪ್ರಮುಖ ಪೋಷಕ ನಟನಾಗಿ ಗುರುತಿಸಿಕೊಂಡರು. ಸಾಮಾಜಿಕ, ಕೌಟುಂಬಿಕ, ಪೌರಾಣಿಕ ಭಕ್ತಿ ಪ್ರಧಾನ ಎಲ್ಲಾ ಮಾದರಿಯ ಮುನ್ನೂರಕ್ಕೂ ಹೆಚ್ಚು ಸಿನಿಮಾಗಳ ವೈವಿಧ್ಯಮಯ ಪಾತ್ರಗಳಲ್ಲಿ ಅಶ್ವಥ್ ಅಭಿನಯಿಸಿದ್ದಾರೆ. ‘ನಮ್ಮ ಮಕ್ಕಳು’, ‘ನಾಗರಹಾವು’, ‘ಮುತ್ತಿನ ಹಾರ’ ಸಿನಿಮಾಗಳ ಉತ್ತಮ ನಟನೆಗೆ ಅತ್ಯುತ್ತಮ ಪೋಷಕ ನಟ ರಾಜ್ಯಪ್ರಶಸ್ತಿ ಪಡೆದಿದ್ದಾರೆ. ಮಧ್ಯಮ ವರ್ಗದ ತಂದೆಯ ಪಾತ್ರಗಳಲ್ಲಿನ ಅವರ ಸಹಜಾಭಿನಯಕ್ಕೆ ಮನಸೋಲದವರಿಲ್ಲ. .ರಾಜಕುಮಾರ್ ಅವರೊಂದಿಗೆ 94 ಚಿತ್ರಗಳಲ್ಲಿ ನಟಿಸಿರುವುದು ವಿಶೇಷ.

ಕೆ.ಎಸ್.ಅಶ್ವಥ್‌ | ಜನನ: 25/03/1925 | ನಿಧನ: 18/01/2010

ನೆನಪು ಸಾಧನೆ - ಸ್ಫೂರ್ತಿ

ಅಪರೂಪದ ಸಾಧಕ ವೀರಾಸ್ವಾಮಿ

ಉತ್ತರ ಭಾರತದ ವ್ಯಕ್ತಿಯೊಬ್ಬರು ಬೆಂಗಳೂರಿನಲ್ಲಿ `ಡ್ರೀಮ್‍ಲ್ಯಾಂಡ್’ ಸಿನಿಮಾ ಹಂಚಿಕೆ ಕಚೇರಿ ನಡೆಸುತ್ತಿದ್ದರು. ಅವರಲ್ಲಿ

ಮಹಾನಟಿ ಮನೋರಮ

‘ಮಾಳಯಿಟ್ಟ ಮಂಗೈ’ (1958) ತಮಿಳು ಚಿತ್ರದೊಂದಿಗೆ ಮನೋರಮ ಬೆಳ್ಳಿತೆರೆಗೆ ಪದಾರ್ಪಣೆ ಮಾಡಿದರು. 1985ರಲ್ಲಿ

ಜನಪ್ರಿಯ ಪೋಸ್ಟ್ ಗಳು

ತಂದೆಯೇ ಗುರುವು

‘ವಿಜಯಚಿತ್ರ’ ಸಿನಿಪತ್ರಿಕೆಯ ಸುವರ್ಣ ಮಹೋತ್ಸವ ಸಂಚಿಕೆಗೆ (1984) ಚಿತ್ರಸಾಹಿತಿ ಆರ್‌.ಎನ್‌.ಜಯಗೋಪಾಲ್‌ ತಮ್ಮ ತಂದೆ, ಮೇರು ಚಿತ್ರಕರ್ಮಿ ಆರೆನ್ನಾರ್‌ ಅವರ ಬಗ್ಗೆ

ಅಪರೂಪದ ನಟ ರಾಜ್‌ಕುಮಾರ್

ನಾಟಕೀಯ ಅಭಿನಯ, ಹಾವ – ಭಾವ, ಸಂಭಾಷಣೆಗಳಿಂದಲೇ ಹೆಸರು ಮಾಡಿದ ನಟ ರಾಜ್‌ಕುಮಾರ್‌. ನಟನಾಗುವುದಕ್ಕಿಂತ ಮುನ್ನ ಅವರು ಮುಂಬೈನಲ್ಲಿ ಪೊಲೀಸ್

ಕಂಚಿನಕಂಠದ ನಟ ಅರಸ್

ಕನ್ನಡ ಚಿತ್ರರಂಗದ ಕಂಚಿನಕಂಠದ ನಟ ಸುಂದರ ಕೃಷ್ಣ ಅರಸ್. ಚಾಮರಾಜನಗರ ಸಮೀಪದ ಉತ್ತವಳ್ಳಿ ಹುಟ್ಟೂರು. ಯಳಂದೂರಿನಲ್ಲಿ ಹೈಸ್ಕೂಲ್ ಶಿಕ್ಷಣ ಮುಗಿಸಿದ