ಸಿನಿಮಾ - ರಂಗಭೂಮಿ
ಇತಿಹಾಸ - ಮಾಹಿತಿ - ಮನರಂಜನೆ

Search
Close this search box.

‘ಸುಲೋಚನೆ’ ಪಾತ್ರಧಾರಿ ತ್ರಿಪುರಾಂಭಾ ಕುರಿತು..

Share this post

(ಬರಹ: ಎನ್‌.ಎಸ್‌.ಶ್ರೀಧರಮೂರ್ತಿ)

ಇವರು ಕನ್ನಡದ ಮೊದಲ ವಾಕ್ಚಿತ್ರ ‘ಸತಿ ಸುಲೋಚನಾ’ದಲ್ಲಿ (1934) ‘ಸುಲೋಚನೆ’ಯ ಪಾತ್ರ ವಹಿಸಿದ್ದ, ಅಂದರೆ ಕನ್ನಡದ ಮೊದಲ ನಾಯಕಿ ತ್ರಿಪುರಾಂಬಾ. ಇವರ ಕುರಿತಂತೆ ನಮಗೆ ಮಾಹಿತಿ ಸಿಕ್ಕಿದ್ದು ತೀರಾ ಇತ್ತೀಚೆಗೆ. ಬೆಳ್ಳಾವೆ ನರಹರಿ ಶಾಸ್ತ್ರಿಗಳ 1938ರಲ್ಲಿ ಅಚ್ಚಾದ ‘ಕನ್ನಡ ರಂಗ ಕಲಾವಿದರು’ ಕೃತಿಯಲ್ಲಿ ಒಂದಿಷ್ಟು ಸುಳಿವು ಸಿಕ್ಕಿತು. ಅದರ ಜಾಡು ಹಿಡಿದು ಹುಡುಕಿದಾದ, ಇವರು ಕನ್ನಡದ ಖ್ಯಾತ ಸಂಗೀತಗಾರ ಶಂಕರಶಾಸ್ತ್ರಿಗಳ ಮಗಳು. 1910ರ ಜುಲೈ 17ರಂದು ಜನಿಸಿದರು. ಮೂಲತಃ ಗಾಯಕರು. ‘ಸತಿ ಸುಲೋಚನಾ’ ಮಾತ್ರವಲ್ಲದೆ ‘ಪುರಂದರ ದಾಸ’ ಕನ್ನಡ ಚಿತ್ರ ಮತ್ತು ಎರಡು ತಮಿಳು ಚಿತ್ರಗಳಲ್ಲಿಯೂ ನಟಿಸಿದ್ದಾರೆ. 1938ರಲ್ಲಿ ತಬಲಾ ವಾದಕ ವೇಣುಗೋಪಾಲ್ ಅವರನ್ನು ವಿವಾಹವಾಗಿ ಸೇಲಂನಲ್ಲಿ ನೆಲೆ ನಿಂತರು. ಅಲ್ಲಿಂದ ಮುಂದೆ ಚಿತ್ರರಂಗ ಬಿಟ್ಟರು. 1979ರಲ್ಲಿ ನಿಧನರಾದರು.

ಮಾಹಿತಿ - ವಿಶೇಷ - ಇತರೆ ಹಿನ್ನೋಟ

ನಟಿ ಸುಬ್ಬಲಕ್ಷ್ಮಿ

ಖ್ಯಾತ ಶಾಸ್ತ್ರೀಯ ಸಂಗೀತಗಾರ್ತಿ, ಭಾರತರತ್ನ ಎಂ.ಎಸ್.ಸುಬ್ಬಲಕ್ಷ್ಮಿ ಸಿನಿಮಾ ನಟಿ ಎನ್ನುವ ವಿಚಾರ ಬಹಳಷ್ಟು

ಧರ್ಮಸೆರೆ – ಪುಟ್ಟಣ್ಣ

‘ಧರ್ಮಸೆರೆ’ (1979) ಚಿತ್ರಕ್ಕೆ ಕುಂದಾಪುರ ಸಮೀಪ ಸಮುದ್ರದ ಹಿನ್ನೀರಿನಲ್ಲಿ ಚಿತ್ರೀಕರಣ ನಡೆಸಲಾಗಿತ್ತು. ನಿರ್ದೇಶಕ ಪುಟ್ಟಣ್ಣನವರು ಬೋಟ್‍ವೊಂದನ್ನು ಟ್ರ್ಯಾಲಿಯಂತೆ ಬಳಕೆ ಮಾಡಿ

ಸಾಹಸಿ ನಿರ್ಮಾಪಕ ಬಿ.ಎಸ್.ರಂಗಾ

ಸಿನಿಮಾ ಛಾಯಾಗ್ರಾಹಕ, ನಿರ್ದೇಶಕ, ನಿರ್ಮಾಪಕರಾಗಿ ಕನ್ನಡಿಗ ಬಿ.ಎಸ್.ರಂಗಾ ದಕ್ಷಿಣ ಭಾರತ ಚಿತ್ರರಂಗದಲ್ಲಿ ದೊಡ್ಡ ಹೆಸರು. ಕನ್ನಡದಲ್ಲಿ ಸಿನಿಮಾಗಳ ನಿರ್ಮಾಣವೇ ಕಷ್ಟವಾಗಿದ್ದ

ಒಂದಾನೊಂದು ಕಾಲದಲ್ಲಿ

ಗಿರೀಶ್ ಕಾರ್ನಾಡ್ ನಿರ್ದೇಶನದ ‘ಒಂದಾನೊಂದು ಕಾಲದಲ್ಲಿ’ (1978) ಚಿತ್ರದಲ್ಲಿ ಶಂಕರ್‌ ನಾಗ್‌. ಕನ್ನಡ ಚಿತ್ರರಂಗ ಮಾತ್ರವಲ್ಲ ಭಾರತೀಯ ಸಿನಿಮಾ ಸಂದರ್ಭದಲ್ಲೇ

ಆರ್‌ಎನ್‌ಜೆ – ಎಲ್‌ಪಿ

ಕನ್ನಡದಲ್ಲಿ ಗೀತರಚನೆಕಾರರೊಬ್ಬರ ಮೊದಲ ಎಲ್.ಪಿ ಬಿಡುಗಡೆ ಆಗಿದ್ದು ಆರ್.ಎನ್.ಜಯ ಗೋಪಾಲ್ ಅವರದ್ದು. ಅದರ ಬಿಡುಗಡೆ ಕಾರ್ಯಕ್ರಮದ ಚಿತ್ರವಿದು. ನರಸಿಂಹನ್, ನಟ