ಸಿನಿಮಾ - ರಂಗಭೂಮಿ
ಇತಿಹಾಸ - ಮಾಹಿತಿ - ಮನರಂಜನೆ

ಸತ್ಯಜಿತ್‌ ರೇ ಅವರಿಗೆ ಆಸ್ಕರ್ ಗೌರವದ ನೆನಪು | ವೀಡಿಯೋ

Share this post

29 ವರ್ಷಗಳ ಹಿಂದೆ 1992, ಮಾರ್ಚ್‌ 30ರ ಇದೇ ದಿನ ಭಾರತದ ಖ್ಯಾತ ಚಿತ್ರನಿರ್ದೇಶಕ ಸತ್ಯಜಿತ್‌ ರೇ ಅವರಿಗೆ ಆಸ್ಕರ್‌ ವಿಶೇಷ ಪುರಸ್ಕಾರ ನೀಡಿ ಗೌರವಿಸಲಾಗಿತ್ತು. ಅನಾರೋಗ್ಯದಿಂದ ರೇ ಅವರು ಕೊಲ್ಕೊತ್ತಾದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆಸ್ಪತ್ರೆಯ ಹಾಸಿಗೆಯಲ್ಲಿ ಮಲಗಿದ್ದ ರೇ ಅವರು ಕೈಲಿ ಆಸ್ಕರ್‌ ಪ್ರಶಸ್ತಿ ಹಿಡಿದು ಅಕಾಡೆಮಿಗೆ ಧನ್ಯವಾದ ಸಮರ್ಪಿಸಿದ್ದರು. ಆಸ್ಕರ್‌ ಕಮಿಟಿಯವರು ಮಾರ್ಚ್‌ 16ರಂದು ಕೊಲ್ಕೊತ್ತಾಗೆ ಧಾವಿಸಿ ಆಸ್ಪತ್ರೆಯಲ್ಲಿದ್ದ ರೇ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಿದ್ದರು. ರೇ ಅವರ ಮಾತುಗಳನ್ನೂ ಅಂದೇ ರೆಕಾರ್ಡ್ ಮಾಡಲಾಗಿತ್ತು. ರೇ ಅವರ ಸಿನಿಮಾ ಪ್ರೀತಿ ಮತ್ತು ಪ್ರಶಸ್ತಿಗೆ ಧನ್ಯವಾದ ಅರ್ಪಿಸಿದ ಮಾತುಗಳನ್ನು ಮಾರ್ಚ್‌ 30ರಂದು 64ನೇ ಅಕಾಡೆಮಿ ಪ್ರಶಸ್ತಿ ಸಮಾರಂಭದಲ್ಲಿ ಪ್ರಸಾರ ಮಾಡಲಾಯ್ತು. ಅಂದು ಕಾರ್ಯಕ್ರಮದಲ್ಲಿ ಖ್ಯಾತ ಹಾಲಿವುಡ್ ತಾರೆ ಆಡ್ರೆ ಹಿಪ್‌ಬರ್ನ್‌ ಅವರು ಸತ್ಯಜಿತ್ ರೇ ಅವರನ್ನು ಪರಿಚಯಿಸಿದ್ದರು. ಈ ಅಪರೂಪದ ವೀಡಿಯೋ ಇಲ್ಲಿದೆ ನೋಡಿ.

ಮಾಹಿತಿ - ವಿಶೇಷ - ಇತರೆ ಹಿನ್ನೋಟ

ನಟಿ ಸುಬ್ಬಲಕ್ಷ್ಮಿ

ಖ್ಯಾತ ಶಾಸ್ತ್ರೀಯ ಸಂಗೀತಗಾರ್ತಿ, ಭಾರತರತ್ನ ಎಂ.ಎಸ್.ಸುಬ್ಬಲಕ್ಷ್ಮಿ ಸಿನಿಮಾ ನಟಿ ಎನ್ನುವ ವಿಚಾರ ಬಹಳಷ್ಟು

ಧರ್ಮಸೆರೆ – ಪುಟ್ಟಣ್ಣ

‘ಧರ್ಮಸೆರೆ’ (1979) ಚಿತ್ರಕ್ಕೆ ಕುಂದಾಪುರ ಸಮೀಪ ಸಮುದ್ರದ ಹಿನ್ನೀರಿನಲ್ಲಿ ಚಿತ್ರೀಕರಣ ನಡೆಸಲಾಗಿತ್ತು. ನಿರ್ದೇಶಕ ಪುಟ್ಟಣ್ಣನವರು ಬೋಟ್‍ವೊಂದನ್ನು ಟ್ರ್ಯಾಲಿಯಂತೆ ಬಳಕೆ ಮಾಡಿ

ಸಾಹಸಿ ನಿರ್ಮಾಪಕ ಬಿ.ಎಸ್.ರಂಗಾ

ಸಿನಿಮಾ ಛಾಯಾಗ್ರಾಹಕ, ನಿರ್ದೇಶಕ, ನಿರ್ಮಾಪಕರಾಗಿ ಕನ್ನಡಿಗ ಬಿ.ಎಸ್.ರಂಗಾ ದಕ್ಷಿಣ ಭಾರತ ಚಿತ್ರರಂಗದಲ್ಲಿ ದೊಡ್ಡ ಹೆಸರು. ಕನ್ನಡದಲ್ಲಿ ಸಿನಿಮಾಗಳ ನಿರ್ಮಾಣವೇ ಕಷ್ಟವಾಗಿದ್ದ

ಒಂದಾನೊಂದು ಕಾಲದಲ್ಲಿ

ಗಿರೀಶ್ ಕಾರ್ನಾಡ್ ನಿರ್ದೇಶನದ ‘ಒಂದಾನೊಂದು ಕಾಲದಲ್ಲಿ’ (1978) ಚಿತ್ರದಲ್ಲಿ ಶಂಕರ್‌ ನಾಗ್‌. ಕನ್ನಡ ಚಿತ್ರರಂಗ ಮಾತ್ರವಲ್ಲ ಭಾರತೀಯ ಸಿನಿಮಾ ಸಂದರ್ಭದಲ್ಲೇ

ಆರ್‌ಎನ್‌ಜೆ – ಎಲ್‌ಪಿ

ಕನ್ನಡದಲ್ಲಿ ಗೀತರಚನೆಕಾರರೊಬ್ಬರ ಮೊದಲ ಎಲ್.ಪಿ ಬಿಡುಗಡೆ ಆಗಿದ್ದು ಆರ್.ಎನ್.ಜಯ ಗೋಪಾಲ್ ಅವರದ್ದು. ಅದರ ಬಿಡುಗಡೆ ಕಾರ್ಯಕ್ರಮದ ಚಿತ್ರವಿದು. ನರಸಿಂಹನ್, ನಟ