ಸಿನಿಮಾ - ರಂಗಭೂಮಿ
ಇತಿಹಾಸ - ಮಾಹಿತಿ - ಮನರಂಜನೆ

Search
Close this search box.

ನಟಿ ಸುಬ್ಬಲಕ್ಷ್ಮಿ

Share this post

ಖ್ಯಾತ ಶಾಸ್ತ್ರೀಯ ಸಂಗೀತಗಾರ್ತಿ, ಭಾರತರತ್ನ ಎಂ.ಎಸ್.ಸುಬ್ಬಲಕ್ಷ್ಮಿ ಸಿನಿಮಾ ನಟಿ ಎನ್ನುವ ವಿಚಾರ ಬಹಳಷ್ಟು ಜನರಿಗೆ ತಿಳಿದಿರಲಿಕ್ಕಿಲ್ಲ. ನಲವತ್ತರ ದಶಕದಲ್ಲಿ ಅವರು ಅರು ಸಿನಿಮಾಗಳಲ್ಲಿ ಅಭಿನಯಿಸಿದ್ದರು. ಇವುಗಳಲ್ಲಿ ಐದು ತಮಿಳು ಸಿನಿಮಾ ಮತ್ತು ಒಂದು ಹಿಂದಿ. ‘ಸೇವಾಸದನಂ’ (1938) ತಮಿಳು ಚಿತ್ರದೊಂದಿಗೆ ಅವರು ಬೆಳ್ಳಿತೆರೆಗೆ ಪದಾರ್ಪಣೆ ಮಾಡಿದರು. 1940ರಲ್ಲಿ ತೆರೆಕಂಡ ‘ಶಕುಂತಲಾ’ ಚಿತ್ರದಲ್ಲಿ ಅವರು ಶೀರ್ಷಿಕೆ ಪಾತ್ರ ನಿರ್ವಹಿಸಿದ್ದರು. ಮರುವರ್ಷ ತೆರೆಕಂಡ ‘ಸಾವಿತ್ರಿ’ (1941) ಚಿತ್ರದಲ್ಲಿ ಸುಬ್ಬಲಕ್ಷ್ಮಿ ಅವರು ನಾರದನಾಗಿ ಕಾಣಿಸಿಕೊಂಡಿದ್ದು ವಿಶೇಷ. 1945ರಲ್ಲಿ ತೆರೆಗೆ ಬಂದ ‘ಮೀರಾ’ ಚಿತ್ರದಲ್ಲಿನ ಮೀರಾಬಾಯಿ ಪಾತ್ರ ಅವರಿಗೆ ಜನಪ್ರಿಯತೆ ತಂದುಕೊಟ್ಟಿತು. ಇದೇ ಸಿನಿಮಾ 1947ರಲ್ಲಿ ‘ಮೀರಾಬಾಯಿ’ ಶೀರ್ಷಿಕೆಯಡಿ ಹಿಂದಿಯಲ್ಲಿ ತಯಾರಾಯ್ತು. ಹಿಂದಿ ಅವತರಣಿಕೆಯಲ್ಲೂ ಸುಬ್ಬಲಕ್ಷ್ಮಿ ಶೀರ್ಷಿಕೆ ಪಾತ್ರ ನಿರ್ವಹಿಸಿದರು. 1947ರಲ್ಲೇ ತೆರೆಕಂಡ ‘1000 ತಲೈ ವಾಂಗಿ ಅಪೂರ್ವ ಚಿಂತಾಮಣಿ’ ತಮಿಳು ಚಿತ್ರದಲ್ಲಿ ಸುಬ್ಬಲಕ್ಷ್ಮಿ ನೃತ್ಯಗಾರ್ತಿಯಾಗಿ ಕಾಣಿಸಿಕೊಂಡಿದ್ದರು.

ಮಾಹಿತಿ - ವಿಶೇಷ - ಇತರೆ ಹಿನ್ನೋಟ

ಧರ್ಮಸೆರೆ – ಪುಟ್ಟಣ್ಣ

‘ಧರ್ಮಸೆರೆ’ (1979) ಚಿತ್ರಕ್ಕೆ ಕುಂದಾಪುರ ಸಮೀಪ ಸಮುದ್ರದ ಹಿನ್ನೀರಿನಲ್ಲಿ ಚಿತ್ರೀಕರಣ ನಡೆಸಲಾಗಿತ್ತು. ನಿರ್ದೇಶಕ ಪುಟ್ಟಣ್ಣನವರು ಬೋಟ್‍ವೊಂದನ್ನು ಟ್ರ್ಯಾಲಿಯಂತೆ ಬಳಕೆ ಮಾಡಿ

ಸಾಹಸಿ ನಿರ್ಮಾಪಕ ಬಿ.ಎಸ್.ರಂಗಾ

ಸಿನಿಮಾ ಛಾಯಾಗ್ರಾಹಕ, ನಿರ್ದೇಶಕ, ನಿರ್ಮಾಪಕರಾಗಿ ಕನ್ನಡಿಗ ಬಿ.ಎಸ್.ರಂಗಾ ದಕ್ಷಿಣ ಭಾರತ ಚಿತ್ರರಂಗದಲ್ಲಿ ದೊಡ್ಡ ಹೆಸರು. ಕನ್ನಡದಲ್ಲಿ ಸಿನಿಮಾಗಳ ನಿರ್ಮಾಣವೇ ಕಷ್ಟವಾಗಿದ್ದ

ಒಂದಾನೊಂದು ಕಾಲದಲ್ಲಿ

ಗಿರೀಶ್ ಕಾರ್ನಾಡ್ ನಿರ್ದೇಶನದ ‘ಒಂದಾನೊಂದು ಕಾಲದಲ್ಲಿ’ (1978) ಚಿತ್ರದಲ್ಲಿ ಶಂಕರ್‌ ನಾಗ್‌. ಕನ್ನಡ ಚಿತ್ರರಂಗ ಮಾತ್ರವಲ್ಲ ಭಾರತೀಯ ಸಿನಿಮಾ ಸಂದರ್ಭದಲ್ಲೇ

ಆರ್‌ಎನ್‌ಜೆ – ಎಲ್‌ಪಿ

ಕನ್ನಡದಲ್ಲಿ ಗೀತರಚನೆಕಾರರೊಬ್ಬರ ಮೊದಲ ಎಲ್.ಪಿ ಬಿಡುಗಡೆ ಆಗಿದ್ದು ಆರ್.ಎನ್.ಜಯ ಗೋಪಾಲ್ ಅವರದ್ದು. ಅದರ ಬಿಡುಗಡೆ ಕಾರ್ಯಕ್ರಮದ ಚಿತ್ರವಿದು. ನರಸಿಂಹನ್, ನಟ